ಬೆಳಗಾವಿ ಉತ್ತರದ ಮಾಳಮಾರುತಿ ವಿಸ್ತರಣೆಯ ಅಂಜನೇಯ ನಗರದಲ್ಲಿ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಶಾಸಕ ಆಸೀಫ್ ಸೇಠ್ ಹಾಗೂ ಯುವ ನಾಯಕ ಅಮಾನ್ ಸೇಠ್ ಅವರ ನೇತೃತ್ವದಲ್ಲಿ ಮೂಲಸೌಕರ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೊಸ ಸ್ಪರ್ಶ ನೀಡಲಾಗಿದೆ. ಪ್ರಮುಖವಾಗಿ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಆದ್ಯತೆ ನೀಡಿರುವುದು ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ.


ಬೆಳಗಾವಿಯ ಮಾಳಮಾರುತಿ ವಿಸ್ತರಣೆಯ ಅಂಜನೇಯ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 1.5 ಕಿಲೋಮೀಟರ್ ಉದ್ದದ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಶಾಸಕ ಆಸೀಫ್ ಸೇಠ್ ಮತ್ತು ಯುವ ನಾಯಕ ಅಮಾನ್ ಸೇಠ್ ಕಾಮಗಾರಿಗಳ ವೀಕ್ಷಣೆ ನಡೆಸಿದ್ದು, ಇದರಿಂದಾಗಿ ಪ್ರದೇಶದಲ್ಲಿ ಸುಸಜ್ಜಿತ ಸಂಚಾರ ವ್ಯವಸ್ಥೆ ಹಾಗೂ ನೈರ್ಮಲ್ಯ ವೃದ್ಧಿಸಿದೆ. ಈ ಸಂದರ್ಭದಲ್ಲಿ ನಾಮನಿರ್ದೆಶಿತ ನಗರಸೇವಕ ದಿನೇಶ್ ನಾಸಿಪುಡಿ, ಸ್ಥಳೀಯ ಮುಖಂಡರು ಮತ್ತು ಅಧಿಕಾರಿಗಳು ಭಾಗವಹಿಸಿ, ಸಾರ್ವಜನಿಕರಿಗೆ ಅನುಕೂಲಕರವಾದ ಈ ಯಶಸ್ವಿ ಯೋಜನೆಯನ್ನು ಶ್ಲಾಘಿಸಿದರು.

ಸಿವಿಕ್ ಅಭಿವೃದ್ಧಿಯ ಜೊತೆಗೆ, ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದ ಸ್ಥಳೀಯ ಸರ್ಕಾರಿ ಶಾಲೆಗೆ ಶಾಸಕರ ಮಾರ್ಗದರ್ಶನದಲ್ಲಿ ಹೊಸ ಶೌಚಾಲಯ ಹಾಗೂ ಹೆಚ್ಚುವರಿ ತರಗತಿ ಕೊಠಡಿಯನ್ನು ನಿರ್ಮಿಸಿಕೊಡಲಾಗಿದೆ. “ಮಕ್ಕಳೇ ನಮ್ಮ ಸಮಾಜದ ಭವಿಷ್ಯ, ಶಿಕ್ಷಣವೇ ನನ್ನ ಮೊದಲ ಆದ್ಯತೆ” ಎಂದು ಶಾಸಕ ಆಸೀಫ್ ಸೇಠ್ ತಿಳಿಸಿದರು.

ಶಾಲೆಯ ಶೈಕ್ಷಣಿಕ ವಾತಾವರಣ ಸುಧಾರಣೆ ಹಾಗೂ ನಗರದ ಅಭಿವೃದ್ಧಿಗೆ ತೋರಿದ ನಿರಂತರ ಕಾಳಜಿಗೆ ಬೆಳಗಾವಿ ಉತ್ತರದ ನಾಗರಿಕರು ಹಾಗೂ ಶಾಲಾ ಮಂಡಳಿ ಕೃತಜ್ಞತೆ ಸಲ್ಲಿಸಿದೆ.
