ವಿದ್ಯಾರ್ಥಿಗಳು ಇಂದಿನ ಆಧುನಿಕ ಯುಗದಲ್ಲಿ ಮೊಬೈಲ್ ಫೋನ್ಗಳ ಅತಿಯಾದ ಗೀಳಿನಿಂದ ಹೊರಬಂದು, ಜ್ಞಾನದ ದೀವಿಗೆಯಾಗಿರುವ ಪುಸ್ತಕಗಳ ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಬೇಕು” ಎಂದು ದಂಡು ಮಂಡಳಿಯ ಮಾಜಿ ಉಪಾಧ್ಯಕ್ಷ ಹಾಗೂ ಪ್ರಮುಖ ಸಮಾಜಸೇವಕ ಸಾಜಿದ್ ಶೇಖ್ ಕರೆ ನೀಡಿದ್ದಾರೆ.
ಬೆಳಗಾವಿ ನಗರದ ಸೇಂಟ್ ಪಾಲ್ಸ್ ಹೈಸ್ಕೂಲಿನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಮೊಬೈಲ್ ಬಿಡಿ ಪುಸ್ತಕ ಕೊಡಿ’ ವಿದ್ಯಾರ್ಥಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಪ್ರಭಾವಿ ಭಾಷಣ ಮಾಡಿದ ಅವರು, ಮೊಬೈಲ್ ಬಳಕೆಯಿಂದ ವಿದ್ಯಾರ್ಥಿಗಳ ಏಕಾಗ್ರತೆ ಹಾಗೂ ಭವಿಷ್ಯದ ಮೇಲಾಗುತ್ತಿರುವ ದುಷ್ಪರಿಣಾಮಗಳನ್ನು ಸುದೀರ್ಘವಾಗಿ ವಿವರಿಸಿ, ಪುಸ್ತಕ ಪ್ರೇಮವನ್ನು ಬೆಳೆಸಿಕೊಳ್ಳುವಂತೆ ಕಿವಿಮಾತು ಹೇಳಿದರು.


ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯಸ್ಥರಾದ ರೆವರೆಂಡ್ ಎರಿಕ್ ಮ್ಯಾಥ್ಯೂಸ್ ಅವರು ಸಾಜಿದ್ ಶೇಖ್ ಅವರ ನಿರಂತರ ಸಮಾಜಸೇವೆಯನ್ನು ಮುಕ್ತಕಂಠದಿಂದ ಪ್ರಶಂಸಿಸಿ, ಸಂಸ್ಥೆಯ ಪರವಾಗಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು. ಈ ಪ್ರೇರಣಾದಾಯಿ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ಶಿಕ್ಷಕರಾದ ತಾರೂಕ್ ಸೇರಿದಂತೆ ಇನ್ನುಳಿದ ಬೋಧಕ ಸಿಬ್ಬಂದಿ ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
