Belagavi

ಕೇದಾರನಾಥೇಶ್ವರ ದೇವಾಲಯದ ಪ್ರಧಾನ ಅರ್ಚಕ ಶ್ರೀ ಗುರುಲಿಂಗಯ್ಯ ಹಿರೇಮಠ ಲಿಂಗೈಕ್ಯ

Share

ಕೇದಾರಪೀಠದ ಕೇದಾರನಾಥೇಶ್ವರ ದೇವಾಲಯದಲ್ಲಿ ಸತತ 51 ವರ್ಷಗಳ ಕಾಲ ಶ್ರದ್ಧಾ-ಭಕ್ತಿಯಿಂದ ಪೂಜಾ ಕೈಂಕರ್ಯ ನೆರವೇರಿಸಿದ್ದ ಪ್ರಧಾನ ಅರ್ಚಕ ಶ್ರೀ ಗುರುಲಿಂಗಯ್ಯ ದುಂಡಯ್ಯ ಹಿರೇಮಠ (76) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಶ್ರೀ ಜಗದ್ಗುರು ಶಾಂತಲಿಂಗ ಶಿವಾಚಾರ್ಯರ ಪರಮ ಶಿಷ್ಯರಾಗಿದ್ದ ಅವರ ಅಗಲಿಕೆಗೆ ಭಕ್ತಸಮೂಹ ತೀವ್ರ ಕಂಬನಿ ಮಿಡಿದಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಜನಿಸಿದ ಶ್ರೀ ಗುರುಲಿಂಗಯ್ಯ ಹಿರೇಮಠ ಅವರು ಉತ್ತರಾಖಂಡದ ಪವಿತ್ರ ಕೇದಾರನಾಥ ಕ್ಷೇತ್ರದಲ್ಲಿ ಸುದೀರ್ಘ ಐದು ದಶಕಗಳ ಕಾಲ ಪ್ರಧಾನ ಅರ್ಚಕರಾಗಿ ದೇವೋತ್ತಮ ಸೇವೆ ಸಲ್ಲಿಸಿದ್ದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ದೈವಾಧೀನರಾಗಿದ್ದಾರೆ. ಕುಟುಂಬದ ಮೂಲಗಳ ಪ್ರಕಾರ, ಮಂಗಳವಾರ ಬೆಳಗಿನ ಜಾವ ಶ್ರೀಗಳ ಮೃತದೇಹ ಬೆಂಗಳೂರಿನಿಂದ ಸ್ವಗ್ರಾಮ ಚಿಕ್ಕಬಾಗೇವಾಡಿಗೆ ತಲುಪಲಿದ್ದು, ಸಾಯಂಕಾಲ 4 ಗಂಟೆಗೆ ವಿವಿಧ ಮಠಾಧೀಶರು, ಗಣ್ಯರು ಹಾಗೂ ಸಾವಿರಾರು ಭಕ್ತರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

Tags:

error: Content is protected !!