ಐತಿಹಾಸಿಕ ವಿಜಯಪುರ ನಗರದ ಡಾ. ಬಿಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ವಿಜಯಪುರ ನಗರದ ಡಾ. ಬಿಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಕುಡಿಯಲು ನೀರಿನ ವ್ಯವಸ್ಥೆ ಶೌಚಾಲಯ ಮತ್ತು ಇತರೆ ಮೂಲಭೂತ ಸೌಕರ್ಯಗಳ ತೊಂದರೆಯಿದ್ದು ವಿದ್ಯಾರ್ಥಿಗಳಿಗೆ, ಕ್ರೀಡಾಪಟುಗಳಿಗೆ, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕ್ರೀಡಾಂಗಣದಲ್ಲಿ ಹಾಳಾಗಿರುವ ವ್ಯಾಯಾಮದ ವಸ್ತುಗಳನ್ನು ದುರಸ್ತಿ ಮಾಡಿಸಿ ಗುಣಮಟ್ಟದ ವಸ್ತುಗಳನ್ನು ಅಳವಡಿಸುವಂತೆ ಮನವಿ ಸಲ್ಲಿಸಿದರು…
