Khanapur

ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ರಾಯಣ್ಣನ ಪುಣ್ಯಭೂಮಿ ನಂದಗಡಕ್ಕೆ ಭೇಟಿ

Share

ಬೆಳಗಾವಿಯ ಹುಕ್ಕೇರಿ ಹಿರೇಮಠದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯತ್ತಿರುವ ಹೋಮ ಹವಣದಲ್ಲಿ ಭಾಗಿಯಾಗಲು ಆಗಮಿಸುತ್ತಿದ್ದ ವೇಳೆ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರಾಯಣ್ಣನ ಪುಣ್ಯ ಭೂಮಿ ನಂದಗಡಕ್ಕೆ ಭೇಟಿ ನೀಡಿದರು.

ಈ ವೇಳೆ ವಿಜಯೇಂದ್ರರರ ಅಭಿಮಾನಿಗಳು ಹಾಗೂ ಗ್ರಾಮಸ್ಥರು ವಿಜಯೇಂದ್ರ ರವರ ಹೆಗಲ ಮೇಲೆ ಕಂಬಳಿ ಹಾಕಿ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಈ ವೇಳೆ ಕುರಿಯ ಮರಿಯನ್ನು ಕಾಣಿಕೆಯಾಗಿ ನೀಡಿದರು.

ಈ ವೆಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ ವಿಜಯೇಂದ್ರರವರು, ಬೆಳಗಾವಿಯ ಹುಕ್ಕೇರಿ ಹಿರೇಮಠದಲ್ಲಿ ಲೋಕಕಲ್ಯಾಣಾರ್ಥವಾಗಿ ಹೋಮ ಹವನ ನಡೆಯಲಿದೆ. ಹಾಗಾಗಿ ಅಲ್ಲಿ ಭಾಗಿಯಾಗುವ ಉದ್ದೇಶದಿಂದ ಬೆಳಗಾವಿಗೆ ಬಂದಿದ್ದೇನೆ. ಈ ಮಧ್ಯೆ ರಾಯಣ್ಣನ ಪುಣ್ಯಭೂಮಿಗೆ ಭೇಟಿ ನೀಡಿದೆ. ಇಂದು ಸಾಯಂಕಾಲ ಹಿಂದಿರುಗುತ್ತೇವೆ ಎಂದರು.

ಈ ಸಂದರ್ಭದಲ್ಲಿ ರಾಯಣ್ಣನ ಅಭಿಮಾನಿಗಳು, ಬಿ.ವೈ ವಿಜಯೇಂದ್ರ ಅಭಿಮಾನಿಗಳು ಹಾಗೂ ಗ್ರಾಮಸ್ಥರೂ ಕೂಡ ಉಪಸ್ಥಿತರಿದ್ದರು.

 

Tags:

error: Content is protected !!