ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕುರಿಗಾಯಿಯನ್ನ ರಕ್ಷಣೆ ಮಾಡಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾ. ಕೊರ್ಲಹಳ್ಳಿ ಬಳಿ ನಡೆದಿದೆ. ಗದಗದಲ್ಲಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕುರಿಗಾಯಿಯನ್ನ ರಕ್ಷಣೆ ಮಾಡಲಾಗಿದೆ. ಗದಗ ಜಿಲ್ಲೆ ಮುಂಡರಗಿ ತಾ. ಕೊರ್ಲಹಳ್ಳಿ ಬಳಿ ಈ ಘಟನೆ ನಡೆದಿದ್ದು,ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾ. ಹೊನ್ನೂರು ಗ್ರಾಮದ ಕುರಿಗಾಯಿ ರಾಮಣ್ಣ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ವ್ಯಕ್ತಿ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದನ್ನು ಅಲ್ಲೇ ಇದ್ದ ಮೀನುಗಾರರು ಕಂಡು ತಕ್ಷಣ ರಕ್ಷಣೆಗೆ ಧಾವಿಸಿದ್ದಾರೆ. ತೆಪ್ಪದಲ್ಲಿ ಕುರಿಗಾಯಿ ಬಿದ್ದ ಸ್ಥಳಕ್ಕೆ ತೆರಳಿ, ನದಿಯಲ್ಲಿ ತೇಲಿ ಹೋಗುತ್ತಿದ್ದ ಕುರಿಗಾಯಿಯ ರಕ್ಷಣೆ ಮಾಡಿದ್ದಾರೆ.

ಈ ರೀತಿ ಆತ್ಮಹತ್ಯೆ ಯತ್ನಿಸಲು ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಆತ್ಮಹತ್ಯೆಗೆ ಯತ್ನಿಸಿದ ಕುರಿಗಾಯನ್ನ ಪ್ರಾಣದ ಹಂಗು ತೊರೆದು ಮೀನುಗಾರರಿಂದ ರಕ್ಷಣೆ ಮಾಡಿದ್ದು, ಮೀನುಗಾರರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
