ಆರ್ಸಿಬಿ ಐಪಿಎಲ್ ಕಪ್ ಗೆಲುವಿನ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದಲ್ಲಿ ಅಭಿಮಾನಿಗಳಿಂದ ಅದ್ಧೂರಿ ವಿಜಯೋತ್ಸವ ಆಚರಿಸಲಾಯಿತು.
ಮಂಗಳವಾರ ರಾತ್ರಿ ಆರ್ಸಿಬಿ ಐಪಿಎಲ್ ಕಪ್ ಗೆಲುವಿನ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದಲ್ಲಿ ಅಭಿಮಾನಿಗಳಿಂದ ಅದ್ಧೂರಿ ವಿಜಯೋತ್ಸವ ಆಚರಿಸಲಾಯಿತು. ದುರ್ಗಾದೇವಿ ದೇವಸ್ಥಾನದ ಆವರಣ ಮುಂದೆ ಡಿಜೆ ಹಾಡುಗಳಿಗೆ ಅಭಿಮಾನಿಗಳು ಸಖತ್ ಸ್ಟೆಪ್ ಹಾಕಿ ಸಂಭ್ರಮಿಸಿದ್ದು, ವಿಶೇಷವಾಗಿತ್ತು.

ಪರಸ್ಪರ ಗುಲಾಲ್ ಎರಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು. ಮಹಿಳೆಯರು ಕೂಡ ಡಿಜೆ ಹಾಡುಗಳಿಗೆ ಹೆಜ್ಜೆ ಹಾಕಿದ್ದು ಗಮನ ಸೆಳೆಯಿತು.