Banglore

ಸರ್ಕಾರವಷ್ಟೇ ಅಲ್ಲ ಆರ್.ಸಿ.ಬಿ ಮತ್ತು ಕ್ರಿಕೆಟ್ ಅಸೋಸಿಯೇಷನ್’ನವರು ಕೂಡ 1 ಕೋಟಿ ರೂಪಾಯಿ ಪರಿಹಾರ ನೀಡಲಿ

Share

ಬೆಂಗಳೂರಿನ ಕಾಲ್ತುಳಿತಕ್ಕೆ ಕೇವಲ ಸರ್ಕಾರವಷ್ಟೇಯಲ್ಲ ಆರ್.ಸಿ.ಬಿ ಮತ್ತು ಕ್ರಿಕೆಟ್ ಅಸೋಸಿಯೇಷನ್’ನವರು ಕೂಡ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು. ಬಿಜೆಪಿಗರು ಇದರಲ್ಲಿ ರಾಜಕಾರಣ ಮಾಡಿ ಜನರ ದಿಕ್ಕು ತಪ್ಪಿಸುತ್ತಿದ್ದು, ತನಿಖೆಯ ಬಳಿಕವೇ ನಿಜಾಂಶ ಬಯಲಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಇಂದು ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಅವರು ಮಾತನಾಡಿದರು. ಕೇವಲ ಸರ್ಕಾರವಷ್ಟೇ ಅಲ್ಲದೇ, ಆರ್.ಸಿ.ಬಿ ಮತ್ತು ಕ್ರಿಕೆಟ್ ಅಸೋಸಿಯೇಷನ್’ನವರು ಕೂಡ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು. ಎಷ್ಟೇ ಪರಿಹಾರ ನೀಡಿದರೂ ಮೃತರ ಕುಟುಂಬದವರಿಗೆ ತುಂಬಲಾರದ ನಷ್ಟವಾಗಿದೆ. ವಿರೋಧ ಪಕ್ಷದವರು ಈ ವಿಷಯವಾಗಿ ರಾಜಕಾರಣ ಮಾಡಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇದರಲ್ಲಿ ಯಾರ ವೈಫಲ್ಯ ಎಂಬುದು ತನಿಖೆಯಿಂದ ಬಹಿರಂಗಗೊಳ್ಳಲಿದೆ ಎಂದರು.

Tags:

error: Content is protected !!