Banglore

ಮಂಡ್ಯಕ್ಕೆ ಕೃಷಿ ವಿಶ್ವವಿದ್ಯಾಲಯ,ನನ್ನ ವಿರೋಧವಿಲ್ಲ,…

Share

ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾಲಯ ತರುವುದಕ್ಕೆ ನನ್ನ ವಿರೋಧವಿಲ್ಲ ಆದರೆ ಈಗಾಗಲೇ ಅಸ್ತಿತ್ವದಲ್ಲಿರುವ ವಿಶ್ವವಿದ್ಯಾಲಯಗಳಿಗೆ ಸರ್ಕಾರ ಸರಿಯಾಗಿ ಅನುದಾನವನ್ನು ನೀಡದ್ದರಿಂದ ಅವು ಮುಚ್ಚುವ ಸ್ಥಿತಿಗೆ ಬಂದಿವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಆರೋಗ್ಯವನ್ನು ದೇವರು ನೋಡಿಕೊಳ್ಳುತ್ತಾನೆ ಮಂಡ್ಯದ ಜಿಲ್ಲೆಯ ಜನರ ಶುಭ ಹಾರೈಕೆ ಇರುವುದರಿಂದ ನನಗೇನು ಆಗುವುದಿಲ್ಲ. ನಾನು ಯಾವುದೇ ಒತ್ತಡದಲ್ಲಿಲ್ಲ ಅವರೇ ಒತ್ತಡದಲ್ಲಿ ಇದ್ದಾರೆ ಎಂದರು. ಕಾವೇರಿ ಆರತಿ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದ ದುಡ್ಡಿನಲ್ಲಿ 100 ಕೋಟಿ ಖರ್ಚು ಮಾಡಿ ಕಾವೇರಿ ಆರತಿ ಮಾಡುತ್ತಿರುವುದಕ್ಕೆ ನನ್ನ ವಿರೋಧವಿದೆ ಎಂದರು. ಮಂತ್ರಿಯಾಗಿ ಒಂದು ವರ್ಷದಾದರೂ ಮಂಡ್ಯಕ್ಕೆ ಏನೂ ಮಾಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಎರಡು ವರ್ಷ ಆಗಿರುವ ರಾಜ್ಯ ಸರ್ಕಾರ ಏನು ಮಾಡಿದೆ ಅಂತ ಮರು ಪ್ರಶ್ನೆ ಮಾಡಿದರು.

ಮಂಡ್ಕವಿಶ್ವವಿದ್ಯಾಲಯ ತಂದಿದ್ದಕ್ಕೆ ನನ್ನ ವಿರೋಧವಿಲ್ಲ ಸರ್ಕಾರ ಈಗಾಗಲೇ ಅಸ್ತಿತ್ವದಲ್ಲಿರುವ ವಿಶ್ವವಿದ್ಯಾಲಯಗಳಿಗೆ ಅನುದಾನ ನೀಡುತ್ತಿಲ್ಲವಾದ್ದರಿಂದ ಅವು ಮುಚ್ಚುವ ಸ್ಥಿತಿಗೆ ಬಂದಿವೆ ಎಂದು ತಿರುಗೇಟು ನೀಡಿದರು ಮಂಡ್ಯಕ್ಕೆ ಹೊಸ ಯೋಜನೆ ಕುರಿತು ಮಾತನಾಡಿ ಯುವಕರಿಗೆ ಉದ್ಯೋಗ ಸೃಷ್ಟಿಗಾಗಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು

Tags:

error: Content is protected !!