Belagavi

ನೀರಾವರಿ ಚೀಫ್ ಇಂಜಿನಿಯರ್’ಗೆ ಲೋಕಾಯುಕ್ತ ಶಾಕ್…

Share

ಇಂದು ಬೆಳ್ಳಂಬೆಳಗ್ಗೆ ನೀರಾವರಿ ಇಲಾಖೆಯ ಮುಖ್ಯ ಇಂಜಿನಿಯರ್’ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಧಾರವಾಡ ಲೋಕಾಯುಕ್ತ ಅಧಿಕಾರಿಗಳಿಂದ ಬೆಳಗಾವಿಯ ರಾಮತೀರ್ಥನಗರದಲ್ಲಿರುವ ಕೆಎನ್ಎನ್ಎಲ್ ಧಾರವಾಡ ವಿಭಾಗದ ಮುಖ್ಯ ಇಂಜಿನಿಯರ್ ಅಶೋಕ ವಸಂದ್ ಅವರ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಲಾಗಿದೆ.

ದಾಳಿಯ ವೇಳೆ ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ಒಂದುವರೆ ಲಕ್ಷ ನಗದು ಪತ್ತೆಯಾಗಿದೆ. ಅಲ್ಲದೇ ಅಶೋಕ ವಸಂದ್ ಅವರ ಧಾರವಾಡದಲ್ಲಿರುವ ಕಾರ್ಯಾಲಯದಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆಯನ್ನು ನಡೆಸಿದ್ದಾರೆ.

Tags:

error: Content is protected !!