ಸಂವಿಧಾನದಲ್ಲಿ ಸಮಾಜವಾದ ಹಾಗೂ ಜಾತ್ಯಾತೀತ ವ್ಯಾಖಾನ ಕುರಿತು ಆರ್ ಎಸ್ ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆಯವರ ಹೇಳಿಕೆ ಕುರಿತು ಕಾಂಗ್ರೆಸ್ ಪಕ್ಷದ ಮುಖಂಡರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ಪಕ್ಷದವರು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಆರ್ ಎಸ್ ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ ಹೇಳುತ್ತಿದ್ದಾರೆ. ಬಿಜೆಪಿ ಪಕ್ಷದವರ ಮೂಲ ಉದ್ದೇಶವೇ ಸಂವಿಧಾನ ಬದಲಾವಣೆ ಮಾಡುವುದು, ಜಾತ್ಯತೀತ ಹಾಗೂ ಸಮಾಜವಾದಿ ಪದವನ್ನು ಸಂವಿಧಾನದಿಂದ ಕಿತ್ತು ಹಾಕುತ್ತೇವೆ ಎಂದು ಹೇಳುತ್ತಾರೆ ಎಂದು ಮಾಜಿ ಶಾಸಕ ರಾಜು ಆಲಗೂರ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿ ಡಾಕ್ಟರ್ ಬಾಬಾಸಾಹೇಬ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವನ್ನು ತೆಗೆದು ಮನಸ್ಕೃತಿ ತರಲು ಹೊರಟಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಯವರು ಸಂವಿಧಾನ ಬದಲಿಸಲು ಹೊರಟರೆ ಉಗ್ರ ಹೋರಾಟ ಎದುರಿಸ ಬೇಕಾಗುತ್ತದೆ ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಗಂಗಾಧರ ಸಂಬಣ್ಣಿ, ವಸಂತ ಹೊನಮೊಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.