Hukkeri

ಅಕ್ರಮ ಗೋಸಾಗಾಟ ಪ್ರಶ್ನಿಸಿದವರನ್ನೇ ಮರಕ್ಕೆ ಕಟ್ಟಿ ಹಾಕಿ ಹಲ್ಲೆ!!!

Share

ಹುಕ್ಕೇರಿ : ಅಕ್ರಮ ಗೋಸಾಗಾಟವನ್ನು ಪ್ರಶ್ನಿಸಿದ ಏಳೆಂಟು ಹಿಂದೂ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ಮಾಡಿದ ಘಟನೆ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ.

ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಅಕ್ರಮ ಗೋಸಾಗಾಟವನ್ನು ತಡೆದ ಶ್ರೀರಾಮ ಸೇನಾ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಇನ್ನೊಂದು ಕೋಮಿನ ಯುವಕರು ಹೊಡೆದ ವಿಡ್ಹಿಯೋ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ. ಇತ್ತಿಚೀಗೆ ಇಂಗಳಿ ಗ್ರಾಮದಲ್ಲಿ ಅಕ್ರಮ ಗೋವುಗಳ ಸಾಗಾಟಕ್ಕೆ ವಿರೋಢ ವ್ಯಕ್ತ ಪಡಿಸಿದ ಹಿನ್ನಲೆಯಲ್ಲಿ ಸುಮಾರು 7-8 ಹಿಂದೂ ಕಾರ್ಯಕರ್ತರನ್ನು ಅನ್ಯ ಕೋಮಿನ ಯುವಕರು ಮರಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ನೈತಿಕ ಪೋಲಿಸಗಿರಿ ಪ್ರದರ್ಶಿಸಿದ್ದಾರೆ. ನಂತರ ಪೋಲಿಸ್ ಠಾಣೆಗೆ ತೆರಳಿ ಎರಡು ಕೋಮಿನ ಯುವಕರು ತಪ್ಪೊಪ್ಪಿಕೊಂಡಿದ್ದಾರೆ.
ಈ ಕುರಿತು ಜಿಲ್ಲಾ ಶ್ರೀರಾಮ ಸೇನಾ ಮುಖಂಡ ವಿಠ್ಠಲ ಗಡ್ಡಿ ಅವರು ಈ ಘಟನೆಯನ್ನು ಖಂಡಿಸಿದ್ದಾರೆ. ರಾಜ್ಯದಲ್ಲಿ ಗೋ ಹತ್ಯಾ ನಿಷೇಧ ಕಾನೂನು ಜಾರಿಯಾಗದ ಹಿನ್ನೆಲೆ ಇಂತಹ ಘಟನೆಗಳು ನಡೆಯುತ್ತಿವೆ. ಪೊಲೀಸ ಠಾಣೆಯಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಿಎಂ ಸಿದ್ಧರಾಮಯ್ಯನವರು ಹಿಂದೂಗಳಿಗೆ ರಕ್ಷಣೆ ನೀಡುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಬೈಟ್
ಯಮಕನಮರ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೋಲಿಸರು ಯಾವ ರೀತಿ ಕ್ರಮ ಜರುಗಿಸುತ್ತಾರೆ ಎಂದು ಕಾದು ನೋಡಬೇಕಿದೆ.

Tags:

error: Content is protected !!