ಹುಕ್ಕೇರಿ : ಹುಕ್ಕೇರಿ ತಾಲೂಕಿನ ಸಂಕೇಶ್ವರ ಮತ್ತು ಹುಕ್ಕೇರಿ ನಗರಗಳಲ್ಲಿ ಮಾದಕ ವಸ್ತು ವಿರೋಧಿ ಅಭಿಯಾನ ಮತ್ತು ಮೋಹರಂ ಹಬ್ಬದ ಶಾಂತಿ ಸಭೆ ಜರುಗಿಸಲಾಯಿತು.
ಸಂಕೇಶ್ವರ ನಗರದಲ್ಲಿ ಪೋಲಿಸ್ ಇನ್ಸಪೇಕ್ಟರ ಶಿವಶಂಕರ ಅವುಜಿ ನೇತೃತ್ವದಲ್ಲಿ ಪಿ ಎಸ್ ಆಯ್ ರಾಘವೇಂದ್ರ ಖೋತ ಮತ್ತು ಸಿಬ್ಬಂದಿ ಗಳು ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಾದಕ ವಸ್ತುಗಳ ಸೇವನೆ ಮತ್ತು ದುಷ್ಪರಿಣಾಮಗಳ ಕುರಿತು ಜಾಗೃತಿ ಜಾಥಾ ಜರುಗಿತು.
ಹುಕ್ಕೇರಿ ನಗರದಲ್ಲಿ ಇನ್ಸಪೇಕ್ಟರ ಮಹಾಂತೇಶ ಬಸ್ಸಾಪೂರೆ ನೇತೃತ್ವದಲ್ಲಿ ಸ್ಥಳಿಯ ಮಹಾವೀರ ಶಿಕ್ಷಣ ಸಂಸ್ಥೆಯ ಸಭಾ ಭವನದಲ್ಲಿ ವಿವಿಧ ವಿಭಾಗದ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮತ್ತು ಅದರ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.
ನಂತರ ಪೋಲಿಸ್ ಠಾಣೆಯಲ್ಲಿ ಮೊಹರಂ ಹಬ್ಬದ ನಿಮಿತ್ಯ ಹುಕ್ಕೇರಿ ಮತ್ತು ಸುತ್ತ ಮುತ್ತಲಿನ ಗ್ರಾಮಗಳ ಮುಖಂಡರ ಸಭೆ ಜರುಗಿಸಿ ಮೋಹರಂ ಹಬ್ಬವನ್ನು ಶಾಂತಿ ಸೌಹಾರ್ದತೆ ಯಿಂದ ಹಿಂದೂ ಮುಸ್ಲಿಂ ಬಾಂಧವರು ಒಟ್ಟಾಗಿ ಆಚರಿಸ ಬೇಕು ಯಾವುದೇ ಸಂದರ್ಭದಲ್ಲಿ ಅಹಿತಕರ ಘಟನೆ ಜರುಗದಂತೆ ಮುಖಂಡರು ನಿಗಾವಹಿಸ ಬೇಕು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಹನ್ನೊಂದು ಜಮಾತ ಅದ್ಯಕ್ಷ ಸಲಿಂ ನದಾಫ್ ,ಮೋಮಿನದಾದಾ, ಉದಯ ಹುಕ್ಕೇರಿ, ಸಲಿಂ ಕಳಾವಂತ, ಪ್ರಜ್ವಲ ನಿಲಜಗಿ, ಇರ್ಷಾಧ ಮೋಕಾಶಿ, ಕಬೀರ ಮಲ್ಲಿಕ ಮತ್ತು ಪುರಸಭೆ ಸದಸ್ಯರು ಸೇರಿದಂತೆ ನೂರಾರ ಗಣ್ಯರು ಉಪಸ್ಥಿತರಿದ್ದರು.
ರಾಜು ಬಾಗಲಕೋಟಿ
ಇನ್ ನ್ಯೂಜ ಹುಕ್ಕೇರಿ.