ಬೆಳಗಾವಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಮಟ್ಟದ ಕುಂದು ಕೊರತೆ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಬಸ್ ನಿಲ್ದಾಣಗಳಲ್ಲಿ ಸಮಸ್ಯೆಗಳನ್ನು ನೀಗಿಸಿ ಪ್ರಯಾಣಿಕರ ಹಿತವನ್ನು ಕಾಪಾಡಬೇಕೆಂದು ಸೂಚನೆಯನ್ನು ನೀಡಿದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಗಾವಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಮಟ್ಟದ ಕುಂದು ಕೊರತೆ ಸಭೆಯನ್ನು ಕರೆಯಲಾಗಿತ್ತು. ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾದ ಶಾಸಕ ರಾಜು ಕಾಗೆ ಸೇರಿದಂತೆ ವರಿಷ್ಠ ಅಧಿಕಾರಿಗಳು ವೇದಿಕೆಯ ಮೇಲೆ ಉಪಸ್ಥಿತರಿದ್ಧರು.
ಬಸ್ ನಿಲ್ದಾಣಗಳ ಅಭಿವೃದ್ಧಿ , ಬಸ್ ತಂಗುದಾಣಗಳ ಅಭಿವೃದ್ಧಿ, ಸಿಬ್ಬಂದಿಗಳ ಕೊರತೆಯ ಕುರಿತು ಮಹತ್ವದ ಚರ್ಚೆ ನಡೆಯಿತು. ಹುಕ್ಕೇರಿ ಕೇಂದ್ರ ಬಸ್ ನಿಲ್ದಾಣದಲ್ಲಿನ ನೀರಿನ ಸಮಸ್ಯೆಯನ್ನು ಎದುರಾಗಿದ್ದು, ಪ್ರಯಾಣಿಕರ ಹಿತದಲ್ಲಿ ನೀರಿನ ಪೂರೈಕೆ ವ್ಯವಸ್ಥೆಯನ್ನು ಮಾಡಬೇಕೆಂದು ಸಚಿವರು ಸೂಚನೆಯನ್ನು ನೀಡಿದರು. ಇನ್ನು ಸವದತ್ತಿ ಸೇರಿದಂತೆ ವಾಯವ್ಯ ವಿಭಾಗದ ಬಸ್ ನಿಲ್ದಾಣಗಳ ಉನ್ನತಿಕರಣ, ಸಿಬ್ಬಂದಿಗಳ ಸಮಸ್ಯೆಗಳ ಕುರಿತು ಗಮನ ಸೆಳೆಯಲಾಯಿತು.
ಈ ಸಂದರ್ಭದಲ್ಲಿ ವಾ.ಕ.ರ.ಸಾ ವಿಭಾಗೀಯ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ಧರು.