Dharwad

ಧಾರವಾಡದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೀದಿಗೆ ಇಳಿದ ಜೆಡಿಎಸ್…. ಕಾಂಗ್ರೆಸ್ ಸರ್ಕಾರದ ಧಿಕ್ಕಾರ ಕೂಗಿ ಜೆಡಿಎಸ್ ಪ್ರತಿಭಟನೆ

Share

ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೇರಿದ ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದೇ, ಕೇವಲ ಬೆಲೆ ಏರಿಕೆ ಮಾಡುತ್ತ ಬಡ ಜನರ ಹೊಟ್ಟೆಯ ಮೇಲೆ ಹೊಡೆಯವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ, ಧಾರವಾಡದಲ್ಲಿ ಜೆಡಿಎಸ್ ಕಾರ್ಯಕರ್ತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.‌

ಧಾರವಾಡ ಜಿಲ್ಲಾ ಜೆಡಿಎಸ್ ಘಟಕ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ‌ ಆಕ್ರೋಶ ವ್ಯಕ್ತಪಡಿಸಿದರು. ‌ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಈಗಾಗಲೇ ಎರಡು ವರ್ಷ ಪೂರ್ಣಗೊಂಡಿದೆ. ಈ ಅವಧಿಯಲ್ಲಿ ಸಾಕಷ್ಟು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರಿಗೆ ಸಾಕಷ್ಟು ತೊಂದರೆಯನ್ನು ತಂದಿಟ್ಟಿದೆ.

ಸಾಮನ್ಯ ವರ್ಗದ ಜನರು ಈ ಸರ್ಕಾರಕ್ಕೆ ಅಧಿಕಾರ ಕೊಟ್ಟು ತಪ್ಪು ಮಾಡಿಬಿಟ್ವಾ ಅನೋ ಭಾವನೆ ಈಗಾಗಲೇ ಬಂದಿದೆ. ಈ ಸರ್ಕಾರ ಆರ್ಥಿಕವಾಗಿ ದಿವಾಳಿ ಸಹ ಆಗಿದೆ. ಈ ಕೂಡಲೇ ಏರಿಕೆ ಮಾಡಿದ ಬೆಲೆಗಳ ಇಳಿಕೆಗೆ ಸರ್ಕಾರ ಮುಂದಾಗಬೇಕು ಇಲ್ಲದೆ ಹೋದಲ್ಲಿ ಅಧಿಕಾರ ಬಿಟ್ಟು ತೊಲಗಲಿ‌ಎಂದು ಆಗ್ರಹಿಸಿದರು.‌

 

Tags:

error: Content is protected !!