ವಿಜಯಪುರ ನಗರದಲ್ಲಿ ಯುವಕನ ಬರ್ಬರ ಹತ್ಯೆಯಾಗಿದೆ. ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಲಾಗಿದ್ದು, ಫೈಸಲ್ ಇನಾಂದಾರ್ (24) ಕೊಲೆಯಾದ ಯುವಕನಾಗಿದ್ದಾನೆ. ಅಪರಿಚಿತ ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ ನಗರದ ಗ್ಯಾಂಗ್ ಬಾವಡಿ ಪ್ರದೇಶದಲ್ಲಿ ಘಟನೆ ನಡೆದಿದೆ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲಾ, ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಎಎಸ್ಪಿ ಶಂಕರ ಮಾರಿಹಾಳ ಭೇಟಿ ಪರಿಶೀಲನೆ ನಡೆಸಿದರು. ಶ್ವಾನದಳ ಬೆರಳಚ್ಚು ತಂಡದಿಂದ ಪರೀಕ್ಷೆ ನಡೆದಿದೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.