ಡಿಸೆಂಬರ್ನಲ್ಲಿ ತಮಗೆ ಶುಕ್ರದೆಸೆ ಆರಂಭವಾಗಲಿದ್ದು, ಸಹಕಾರ ಸಚಿವ ಸ್ಥಾನ ಬಹುತೇಕ ಖಚಿತ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾತನಾಡಿದ ಅವರು, ಡಿಸೆಂಬರ್ನಲ್ಲಿ ತಮಗೆ ಸಹಕಾರ ಸಚಿವ ಸ್ಥಾನ ಬಹುತೇಕ ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಯು, ಈ ಹಿಂದೆ ಉಪ ಮುಖ್ಯಮಂತ್ರಿಯಾಗಿದ್ದಾಗ ಆರ್. ಅಶೋಕ ಅವರು ಹೇಳಿದ್ದ ಭವಿಷ್ಯ ನಿಜವಾಗುವ ಸೂಚನೆ ನೀಡಿದೆ. ತಮಗೆ 2008 ರಲ್ಲಿ ಸಹಕಾರ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದು, “ನನಗೆ ಡಿಸೆಂಬರ್ನಲ್ಲಿ ಶುಕ್ರದೆಸೆ ಪ್ರಾರಂಭವಾಗಲಿದೆ” ಎಂದು ಹೇಳಿದ್ದಾರೆ. ಮತ್ತೊಮ್ಮೆ ಸಹಕಾರ ಸಚಿವನಾಗಿ ಅಧಿಕಾರ ವಹಿಸಿಕೊಂಡರೆ, ರೈತರ ಕಬ್ಬಿನ ತೂಕದಲ್ಲಿ ಮೋಸ ಮಾಡುವ ಖಾಸಗಿ ಕಾರ್ಖಾನೆಗಳ ಮಾಲೀಕರಿಗೆ ತಮ್ಮ ಶಕ್ತಿ ಏನೆಂದು ತೋರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ