Vijaypura

ಪ್ರಿಯಾಂಕ ಖರ್ಗೆ ಕಲಬುರ್ಗಿ ಜಿಲ್ಲೆಯನ್ನ ಅಭಿವೃದ್ಧಿ ಮಾಡಿ ಮಾದರಿ ಜಿಲ್ಲೆ ಮಾಡಲಿ; ಶಾಸಕ ಯತ್ನಾಳ ಸವಾಲು

Share

ವಿಜಯಪುರ…

 

ಆ್ಯಂಕರ್: ಸಾರ್ವಜನಿಕ ಸ್ಥಳಗಳಲ್ಲಿ RSS ಕಾರ್ಯಚಟುವಟಿಕೆ ನಿಷೇಧಕ್ಕಾಗಿ ಸಿಎಂಗೆ ಪ್ರಿಯಾಂಕ ಖರ್ಗೆ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ ಹೊರಹಾಕಿದ್ದಾರೆ. ಟ್ವಿಟ್ ಮೂಲಕ ಆಕ್ರೋಶ ಹೊರ ಹಾಕಿರುವ ಶಾಸಕ ಯತ್ನಾಳ್ ಇದು ಬೌಧಿಕ ದಿವಾಳಿತನ ಎಂದು ಪ್ರಿಯಾಂಕ ಖರ್ಗೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪ್ರಕೃತಿ ವಿಕೋಪ, ರೈಲು ದುರಂತ, ಕೋವಿಡ್, ಅಪಘಾತಗಳಲ್ಲಿ ಸಹಾಯಕ್ಕೆ ನಿಲ್ಲೋದು ಇದೆ RSS, ರಾಷ್ಟ್ರಪ್ರೇಮ, ದೇಶಭಕ್ತಿ, ಶಿಸ್ತಿಗೆ ಮತ್ತೊಂದು ಹೆಸರು RSS ಪ್ರತಿಫಲದ ಆಸೆ ಇಲ್ಲದೆ RSS ಸ್ವಯಂಸೇವಕರು ದುಡಿಯುತ್ತಿದ್ದಾರೆ ಸಂಘದ ನಿಷೇಧ ಯಾರಿಂದಲೂ ಸಾಧ್ಯವಿಲ್ಲ ಎಂದು ಟೀಕೆ ಮಾಡಿದ್ದಾರೆ. ಪ್ರಿಯಾಂಕ ಖರ್ಗೆ ರಾಜಕೀಯ ಪ್ರೇರಿತ ಹೇಳಿಕೆ ನಿಲ್ಲಿಸಲಿ, ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಗಮನ ಕೊಡಲಿ, ನಿಷೇಧ ಮಾಡೋದಿದ್ದರೇ SDPI ದೇಶದ್ರೋಹಿ ಸಂಘಟನೆ ನಿಷೇಧಿಸಲಿ, ಅನ್ಯಕೋಮಿನ ಹಬ್ಬಗಳ ದಿನ ತಲವಾರ್ ಹಿಡಿದು, ಹೆಲ್ಮೆಟ್ ಧರಿಸದೆ ಓಡಾಡುವ ಪುಂಡರ ಹೆಡೆಮುರಿ ಕಟ್ಟಲಿ, ಬಕ್ರೀದ್ ಇತರೆ ಹಬ್ಬಗಳ ಪ್ರಾಣಿ ಬಲಿ ನಿಷೇಧಿಸಲಿ ಎಂದು ಸವಾಲು ಹಾಕಿದ್ದಾರೆ. ಗಣಿತ, ವಿಜ್ಞಾನ, ಆಂಗ್ಲ ಹೇಳಿಕೊಡದೆ, ಧರ್ಮದ ಬಗ್ಗೆ ತಪ್ಪು ಕಲ್ಪನೆ ನೀಡುವ ಮದರಸಾ ನಿಷೇಧಿಸಲಿ ಎಂದಿದ್ದಾರೆ. ಕಲಬುರ್ಗಿ ಜಿಲ್ಲೆಯನ್ನ ಅಭಿವೃದ್ಧಿ ಮಾಡಿ ಮಾದರಿ ಜಿಲ್ಲೆ ಮಾಡಲಿ ಎಂದು ಸವಾಲು ಹಾಕಿದ್ದಾರೆ

Tags:

error: Content is protected !!