Dharwad

ದ್ವೇಷ ಭಾಷಣ ಮಸೂದೆ ಕಾಯ್ದೆ ಜಾರಿ ವಿರೋಧಿಸಿ ಧಾರವಾಡದಲ್ಲಿ ಬಿಜೆಪಿ ಅಕ್ರೋಶ…

Share

ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷ ಭಾಷಣ ಮಸೂದೆ ಕಾಯ್ದೆ ಜಾರಿ ಮಾಡಿರುವುದನ್ನು ವಿರೋಧಿಸಿ, ಧಾರವಾಡದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ.

ವೈ- ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಈ ಹಿಂದೆ ದೇಶದಲ್ಲಿ ಇಂದಿರಾ ಗಾಂಧಿ ಅವರು ತುರ್ತು ಪರಸ್ಥಿತಿ ಹೇರಿ ಜನ ಮಾತನಾಡದಂತೆ ಮಾಡಿದ್ದರು. ಈಗ ರಾಜ್ಯ ಕಾಂಗ್ರೆಸ್ ಸರ್ಕಾರ ತಾನು ಮಾಡಿರುವ ಅವ್ಯವಹಾರಗಳನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ದ್ವೇಷ ಭಾಷಣ ಮಸೂದೆ ಕಾಯ್ದೆ ಜಾರಿಗೊಳಿಸಿದೆ. ರಾಜ್ಯದಲ್ಲಿ ಈ ಸರ್ಕಾರ ಜನರ ವಾಕ್ ಸ್ವಾತಂತ್ರ್ಯ ಕಸಿದುಕೊಳ್ಳುತ್ತಿದೆ. ಕೂಡಲೇ ರಾಜ್ಯ ಸರ್ಕಾರ ತಾನು ಜಾರಿಗೊಳಿಸಿರುವ ದ್ವೇಷ ಭಾಷಣ ಮಸೂದೆ ಕಾಯ್ದೆಯನ್ನು ಹಿಂಪಡೆಯಬೇಕು ಇಲ್ಲದೇ ಹೋದರೆ ಬರುವ ದಿನಗಳಲ್ಲಿ ಬಿಜೆಪಿ ರಾಜ್ಯದಾದ್ಯಂತ ದೊಡ್ಡಮಟ್ಟದ ಹೋರಾಟಕ್ಕೆ ಕರೆ ನೀಡುತ್ತದೆ ಎಂದು ಬಿಜೆಪಿ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

Tags:

error: Content is protected !!