Khanapur

ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿಯಾಗಿ ಡಾ. ಅಂಜಲಿ ನಿಂಬಾಳ್ಕರ್ ನೇಮಕ

Share

ರಾಜಕೀಯ ಚತುರತೆ ಮತ್ತು ಸಂಘಟನಾ ಶಕ್ತಿಯ ಮೂಲಕ ಎಐಸಿಸಿ ಮಟ್ಟದಲ್ಲಿ ಗುರುತಿಸಿಕೊಂಡಿರುವ ಖಾನಾಪುರದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಈಗ ಮತ್ತೊಂದು ಪ್ರಮುಖ ಜವಾಬ್ದಾರಿ ಲಭಿಸಿದೆ. ಈ ಹಿಂದೆ ಉತ್ತರಾಖಂಡ ಮತ್ತು ತೆಲಂಗಾಣ ರಾಜ್ಯಗಳ ಉಸ್ತುವಾರಿಯಾಗಿ ಪಕ್ಷವನ್ನು ಬಲಪಡಿಸಿದ್ದ ಇವರನ್ನು ಈಗ ಎಐಸಿಸಿ ಕಾರ್ಯದರ್ಶಿಗಳಾಗಿ ಉತ್ತರ ಪ್ರದೇಶದ ವಿಕ್ಷಕರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಸಂಘಟನಾ ಶ್ರೀ ಜನ್ ಅಭಿಯಾನದ ಅಡಿಯಲ್ಲಿ ಈ ನೇಮಕಾತಿ ನಡೆದಿದ್ದು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಅಂಜಲಿ ಅವರ ಕಾರ್ಯಕ್ಷಮತೆಯನ್ನು ಮೆಚ್ಚಿ ಈ ಮಹತ್ವದ ಹೊಣೆಗಾರಿಕೆಯನ್ನು ನೀಡಿದ್ದಾರೆ. ಉತ್ತರ ಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ ಪಕ್ಷದ ಸಂಘಟನೆಯನ್ನು ಬಲಿಷ್ಠಗೊಳಿಸುವ ಸವಾಲು ಈಗ ಇವರ ಹೆಗಲಿಗೇರಿದೆ.

Tags:

error: Content is protected !!