ಇನ್ನು ಅದೇರೀತಿ ಬೆಳಗಾವಿಯ ಜಯನಗರದ ದಕ್ಷಿಣಮುಖಿ ಹನುಮಾನ್ ಮಂದಿರದಲ್ಲಿಯೂ ಹನುಮಾನ ಜಯಂತಿಯನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಆಂಜನೇಯನ ಮೂರ್ತಿಗೆ ವಿಶೇಷ ಅಭಿಷೇಕ, ಅಲಂಕಾರ, ಪೂಜೆ, ಮಹಾ ಆರತಿ ನೆರವೇರಿಸಲಾಯಿತು. ನಂತರ ಸುಮಂಗಲಿಯರಿಂದ ಬಾಲ ಹನುಮನನ್ನು ತೊಟ್ಟಿಲಿಗೆ ಹಾಕಿ ಹನುಮಾನ ಜನ್ಮೋತ್ಸವವನ್ನು ಆಚರಿಸಲಾಯಿತು.

ಈ ಬಾರಿ ತಿರುಪತಿ ಬಾಲಾಜಿ ಮಂದಿರದ ಮಾದರಿಯಲ್ಲಿ ಅಲಂಕಾರವನ್ನು ಮಾಡಲಾಗಿದೆ. ಪ್ರತಿವರ್ಷ ಸುಮಾರು ೪-೫ ಸಾವಿರ ಭಕ್ತರು ಶ್ರೀ ಆಂಜನೇಯನ ದರ್ಶನ ಪಡೆದು ಮಹಾಪ್ರಸಾದವನ್ನು ಸ್ವೀಕರಿಸುತ್ತಾರೆ.
