BELAGAVI

ಡಿ.ಕೆ.ಶಿವಕುಮಾರ್ ಭೇಟಿಯಾಗಿ ಶುಭ ಕೋರಿದ ಡಾ.ಪ್ರಭಾಕರ್ ಕೋರೆ

Share

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಬೆಳಗಾವಿಯ ಕೆಎಲ್‌ಇ ಕಾಹೇರ್ ಹಾಗೂ ಹುಬ್ಬಳ್ಳಿ ತಾಂತ್ರಿಕ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ.ಪ್ರಭಾಕರ್ ಕೋರೆ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹಾರ್ದಿಕವಾಗಿ ಅಭಿನಂದಿಸಿದ್ದಾರೆ.

ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಡಾ.ಪ್ರಭಾಕರ್ ಕೋರೆ ಅವರು ಪ್ರೀತಿಯಿಂದ ಹೂಗುಚ್ಛ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿಮ್ಮ ಆಡಳಿತದ ಅವಧಿಯಲ್ಲಿ ಕರ್ನಾಟಕ ರಾಜ್ಯವು ಸರ್ವಾಂಗೀಣ ಅಭಿವೃದ್ಧಿ ಕಾಣಲಿ ಎಂದು ಶುಭ ಹಾರೈಸಿದರು. ಮುಖ್ಯಮಂತ್ರಿಗಳ ಈ ಮಹತ್ವದ ಭೇಟಿಯ ಸಂದರ್ಭದಲ್ಲಿ ಕೆಎಲ್‌ಇ ಸಂಸ್ಥೆಯ ಹಿರಿಯರು ಹಾಗೂ ಮಾಜಿ ನಿರ್ದೇಶಕರಾದ ಶಂಕರಣ್ಣ ಮುನವಳ್ಳಿ ಅವರು ಉಪಸ್ಥಿತರಿದ್ದು, ನೂತನ ಮುಖ್ಯಮಂತ್ರಿಗಳಿಗೆ ತಮ್ಮ ಆತ್ಮೀಯ ಅಭಿನಂದನೆಗಳನ್ನು ಸಲ್ಲಿಸಿದರು.

Tags:

error: Content is protected !!