ಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಅಲ್ಪ ಸಂಖ್ಯಾತ ಮುಸ್ಲಿಂ ಐದು ಜನ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಮುಸ್ಲಿಂ ಸಮಜದವರಿಂದ ಪ್ರತಿಭಟನೆ ನಡೆಸಲಾಯಿತು.

ಕುಂದಗೋಳ ಪಟ್ಟಣದ ಗಾಳಿ ಮರೇಮ್ಮದೇವಿ ದೇವಸ್ಥಾನದ ಬಳಿ ಪ್ರತಿಭಟನೆ ನಡೆಸಿದ ಮುಸ್ಲಿಂ ಬಾಂಧವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಮುಸ್ಲಿಮರ ಶೇ.80% ಮತಗಳು ಕಾರಣವಾಗಿವೆ. ನಮ್ಮ ಸಮುದಾಯದ ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕು ಬಿ.ಝಡ್.ಜಮೀದ್ ಅಹ್ಮದ್ ಅವರನ್ನೂ ಉಪಮುಖ್ಯಮಂತ್ರಿಯಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ಈ ವಿಷಯಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ರಾಜು ಮಾವರಕರ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

