Bagalkot

ಖಾಯಂ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ ಸೂಳೇಭಾವಿ ಆಸ್ಪತ್ರೆ ಎದುರು ಧರಣಿ

Share

ಬಾಗಲಕೋಟೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆ ಸಂಪೂರ್ಣ ಹದಗೆಟ್ಟಿದ್ದು, ಖಾಯಂ ವೈದ್ಯರಿಲ್ಲದೆ ರೋಗಿಗಳು ಪರದಾಡುವಂತಾಗಿದೆ. ಹುನಗುಂದ ತಾಲ್ಲೂಕಿನ ಸೂಳೇಭಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಇಂದು ಗ್ರಾಮಸ್ಥರು ಭಾರಿ ಪ್ರತಿಭಟನೆ ನಡೆಸಿದ್ದು, ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಸೂಳೇಭಾವಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯಾಧಿಕಾರಿಗಳನ್ನು ನೇಮಿಸಬೇಕೆಂದು ಆಗ್ರಹಿಸಿ ಇಂದು ಗ್ರಾಮಸ್ಥರು ಆಸ್ಪತ್ರೆಯ ಎದುರು ಭಾರಿ ಧರಣಿ ಸತ್ಯಾಗ್ರಹ ನಡೆಸಿದರು. ಆಸ್ಪತ್ರೆಯಲ್ಲಿ ಉಂಟಾಗಿರುವ ತೀವ್ರ ಅವ್ಯವಸ್ಥೆಯನ್ನು ಖಂಡಿಸಿದ ಪ್ರತಿಭಟನಾಕಾರರು, ತಕ್ಷಣವೇ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಬಾರದ ವೈದ್ಯರ ವಿರುದ್ಧ ತೀವ್ರ ಧಿಕ್ಕಾರ ಕೂಗಿದ ಸಾರ್ವಜನಿಕರು, ಅಧಿಕಾರಿಗಳು ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡುವುದನ್ನು ನಿಲ್ಲಿಸಬೇಕು ಮತ್ತು ಗ್ರಾಮೀಣ ಭಾಗದ ಆರೋಗ್ಯ ಸೇವೆಯನ್ನು ತಕ್ಷಣವೇ ಬಲಪಡಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.

Tags:

error: Content is protected !!