Belagavi

ಪತ್ರಕರ್ತರ ಆರೋಗ್ಯ ವಿಮೆ ಮುಂದುವರಿಸಲು ಮನವಿ

Share

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುದ್ರಣ ಮಾಧ್ಯಮದ ವರದಿಗಾರರಿಗೆ ನೀಡಲಾಗುತ್ತಿರುವ ಆರೋಗ್ಯ ವಿಮೆ ಸೌಲಭ್ಯವನ್ನು ಪ್ರಸಕ್ತ ವರ್ಷವೂ ಮುಂದುವರಿಸಬೇಕು ಎಂದು ಮುದ್ರಣ ಮಾಧ್ಯಮ ಸಂಘವು ಮನವಿ ಮಾಡಿದೆ.

ಈ ಕುರಿತು ಮೇಯರ್, ಉಪಮೇಯರ್ ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿರುವ ಸಂಘದ ಪದಾಧಿಕಾರಿಗಳು, ಪತ್ರಕರ್ತರ ಆರೋಗ್ಯದ ಬಗ್ಗೆ ಪಾಲಿಕೆ ಕಳೆದ ಹಲವು ವರ್ಷಗಳಿಂದ ವಿಶೇಷ ಕಾಳಜಿ ವಹಿಸಿ ಆರೋಗ್ಯ ವಿಮೆ ಸೌಲಭ್ಯ ಒದಗಿಸುತ್ತಿರುವುದು ಶ್ಲಾಘನೀಯ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.

ಈ ಯೋಜನೆಯನ್ನು ನಿರಂತರವಾಗಿ ಮುಂದುವರಿಸಲು ಸಹಕರಿಸಿದ ಸಚಿವರು, ಶಾಸಕರು, ಮೇಯರ್, ಉಪಮೇಯರ್, ನಗರಸೇವಕರು ಹಾಗೂ ಪಾಲಿಕೆ ಆಯುಕ್ತರಿಗೆ ಸಂಘವು ಕೃತಜ್ಞತೆ ಸಲ್ಲಿಸಿದೆ.

ಪ್ರಸಕ್ತ ವರ್ಷದ ಆರೋಗ್ಯ ವಿಮೆಯ ಅವಧಿ ಮುಕ್ತಾಯಗೊಂಡಿದ್ದು, ಅದನ್ನು ನವೀಕರಿಸಲು ಮಹಾನಗರ ಪಾಲಿಕೆ ಕಾರ್ಯಪ್ರವೃತ್ತವಾಗಿರುವುದು ಪತ್ರಕರ್ತ ಸಮುದಾಯದಲ್ಲಿ ಸಂತಸ ಮೂಡಿಸಿದೆ. ಆದರೆ, ಪಾಲಿಕೆ ವ್ಯಾಪ್ತಿಯಲ್ಲಿ ನೈಜವಾಗಿ ಕಾರ್ಯನಿರ್ವಹಿಸುತ್ತಿರುವ ಮುದ್ರಣ ಮಾಧ್ಯಮದ ವರದಿಗಾರರ ಹೆಸರುಗಳನ್ನು ಸೂಕ್ತವಾಗಿ ಪರಿಶೀಲಿಸಿ, ಅರ್ಹ ಪತ್ರಕರ್ತರನ್ನು ಮಾತ್ರ ಯೋಜನೆಯ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪತ್ರಕರ್ತರ ಆರೋಗ್ಯ ಹಾಗೂ ಅವರ ಕುಟುಂಬಗಳ ಹಿತದೃಷ್ಟಿಯಿಂದ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಿ, ವಿಮೆ ಸೌಲಭ್ಯವನ್ನು ಶೀಘ್ರ ಮುಂದುವರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಘ ಕೋರಿದೆ.

Tags:

error: Content is protected !!