ಕಿತ್ತೂರು ಕ್ಷೇತ್ರದ ಶಾಸಕ ಬಾಬಾಸಾಹೇಬ್ ಪಾಟೀಲ್ ಅವರ ಜನ್ಮದಿನವನ್ನು ಕ್ಷೇತ್ರದ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಅತ್ಯಂತ ವಿಜೃಂಭಣೆಯಿಂದ ಆಚರಿಸಿದ್ದಾರೆ. ಈ ವೇಳೆ ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ ಸೇರಿದಂತೆ ಹಲವು ಗಣ್ಯರು ಶಾಸಕರಿಗೆ ಶುಭ ಕೋರಿದ್ದಾರೆ.


ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ್ ಅವರ ಜನ್ಮದಿನೋತ್ಸವವು ಕಿತ್ತೂರು ಮತ್ತು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು, ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಈ ಶುಭ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ ಹಾಗೂ ಅಹಮದ್ ರೇಜುಮೆ ಸೇರಿದಂತೆ ಹಲವು ಪ್ರಮುಖ ನಾಯಕರು ಮತ್ತು ಅಭಿಮಾನಿಗಳು ನೇರವಾಗಿ ಆಗಮಿಸಿ ಶಾಸಕರಿಗೆ ಸನ್ಮಾನಿಸಿ, ಅಭಿನಂದನೆಗಳನ್ನು ಸಲ್ಲಿಸಿದರು.
