ಕೇಂದ್ರ ಶಿಕ್ಷಣ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಬಗ್ಗೆ ಪ್ರಿಯಾಂಕಾ ಗಾಂಧಿ ಅವರು ಮಾಡಿದ ಹೇಳಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲೆ ಮಹಿಳಾ ಮೋರ್ಚಾ ಕಾರ್ಯಕರ್ತರು ಹಾಗೂ ಪ್ರಮುಖರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ನೂರಾರು ಮಹಿಳಾ ಕಾರ್ಯಕರ್ತರನ್ನ ಬಂಧಿಸಿದರು.

ಅವರಿಂದ ನಗರದ ಭಾರತೀಯ ಜನತಾ ಪಕ್ಷದ ಕಚೇರಿಯಿಂದ ಮೆರವಣಿಗೆ ಹೊರಟು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಸಮೀಪ ಪ್ರತಿಭಟನಾ ಮೆರವಣಿಗೆ ಬರುತ್ತಿದ್ದಂತೆ ಪೊಲೀಸರು ಕಾರ್ಯಕರ್ತರನ್ನ ಬಂಧನ ಮಾಡಿದರು. ಭಾರತೀಯ ಜನತಾ ಪಕ್ಷದ
ಹುಬ್ಬಳ್ಳಿ ಧಾರವಾಡ ಮಹಾನಗರ ಮಹಿಳಾ ಮಾರ್ಚಾ ಅಧ್ಯಕ್ಷೆ ಸೀಮಾ ಲದವಾ, ಅಕ್ಕಮ್ಮ ಹೆಗಡೆ, ಸುಮಾ ಶಿವನಗೌಡರ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರು ಮುಂತಾದವರನ್ನ ವಶಕ್ಕೆ ಪಡೆಯಲಾಯಿತು.
